ಸ್ವಂತ ಕಾಲ ಮೇಲೆ ನಿಂತು ಬದುಕು ಕಟ್ಟಿಕೊಳ್ಳಬೇಕು ಎಂಬ ಛಲ ಇರುವ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ.
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಿದ್ದು, ಅರ್ಹರಿಗೆ ಬರೋಬ್ಬರಿ 3 ಲಕ್ಷ ರೂಪಾಯಿಗಳ ಸಬ್ಸಿಡಿ ಸಿಗಲಿದೆ.
Ahara Vahini Karnataka 2026:
ನಗರ ಪ್ರದೇಶಗಳಲ್ಲಿ ಜನಸಂದಣಿ ಇರುವ ಕಡೆ ತಿಂಡಿ-ತಿನಿಸುಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ, ನಾಲ್ಕು ಚಕ್ರಗಳ ಇವಿ-ಗೂಡ್ಸ್ (EV-Goods) ವಾಹನಗಳನ್ನು ಖರೀದಿಸಲು ನಿಗಮವು ಧನಸಹಾಯ ನೀಡುತ್ತದೆ.
- ಸಹಾಯಧನ: ವಾಹನ ಖರೀದಿಗೆ ನಿಗಮದಿಂದ ₹3 ಲಕ್ಷ ಉಚಿತ ನೆರವು.
- ಉಳಿದ ಮೊತ್ತ: ಬಾಕಿ ಹಣವನ್ನು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯಬಹುದು.
ಈ ಯೋಜನೆಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ. ಗಮನಿಸಿ: ಈ ಕೆಳಗಿನ ಸಮುದಾಯದವರು ಈ ನಿಗಮದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ (ಏಕೆಂದರೆ ಇವರಿಗೆ ಪ್ರತ್ಯೇಕ ನಿಗಮಗಳಿವೆ):
- ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇವುಗಳ ಉಪ ಸಮುದಾಯಗಳನ್ನು ಹೊರತುಪಡಿಸಿ ಉಳಿದ ಹಿಂದುಳಿದ ವರ್ಗದವರು ಇಲ್ಲಿ ಅರ್ಜಿ ಸಲ್ಲಿಸಬೇಕು. ಇನ್ನುಳಿದ ಜಾತಿಯವರಿಗೆ ಪ್ರತ್ಯೇಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು:
- ವಯಸ್ಸು: 21 ರಿಂದ 45 ವರ್ಷದೊಳಗಿರಬೇಕು.
- ಆದಾಯ: ಕುಟುಂಬದ ವಾರ್ಷಿಕ ವರಮಾನ ₹3 ಲಕ್ಷ ಮೀರಿರಬಾರದು.
- ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಈ ವಿಧಾನಸಭಾ ಕ್ಷೇತ್ರದವರಿಗೆ ಅವಕಾಶ:
ಈ ಯೋಜನೆಯು ಕೇವಲ ಈ ಕೆಳಗಿನ ವಿಧಾನಸಭಾ ಕ್ಷೇತ್ರ/ನಗರಗಳಿಗೆ ಸೀಮಿತವಾಗಿದೆ:
- ಬೆಂಗಳೂರು ನಗರ: ಬ್ಯಾಟರಾಯನಪುರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ, ಗಾಂಧಿನಗರ, ಕೆ.ಆರ್. ಪುರಂ, ಮಹದೇವಪುರ, ಪುಲಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್ ನಗರ, ಶಿವಾಜಿನಗರ, ದಾಸರಹಳ್ಳಿ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ, ಗೋವಿಂದರಾಜನಗರ, ವಿಜಯನಗರ, ಚಾಮರಾಜಪೇಟೆ, ಚಿಕ್ಕಪೇಟೆ, ರಾಜರಾಜೇಶ್ವರಿ ನಗರ, ಶಾಂತಿನಗರ, ರಾಜಾಜಿನಗರ.
- ಇತರೆ ಜಿಲ್ಲೆಗಳು: ಶಿವಮೊಗ್ಗ ನಗರ, ತುಮಕೂರು ನಗರ, ಮೈಸೂರು (ಕೃಷ್ಣರಾಜ, ಚಾಮರಾಜ, ನರಸಿಂಹರಾಜ), ಮಂಗಳೂರು ನಗರ (ದಕ್ಷಿಣ), ಬೆಳಗಾವಿ ಉತ್ತರ, ಹುಬ್ಬಳ್ಳಿ-ಧಾರವಾಡ (ಪೂರ್ವ, ಸೆಂಟ್ರಲ್), ಕಲಬುರಗಿ ಉತ್ತರ, ಬಳ್ಳಾರಿ ನಗರ.
Ahara Vahini Scheme Karnataka Application 2026:
ಆನ್ಲೈನ್ ಅರ್ಜಿ: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್ಸೈಟ್: sevasindhu.karnataka.gov.in, www.dbcdc.karnataka.gov.in
ಸಹಾಯವಾಣಿ: 080-22374832 / 8050770004 / 8050770005.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-03-2026
ಆಸಕ್ತರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ (ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ) ಅರ್ಜಿ ಸಲ್ಲಿಸಬೇಕು.
ಇತರೆ ಮಾಹಿತಿಗಳನ್ನು ಓದಿ

