ಗಂಗಾ ಕಲ್ಯಾಣ ಯೋಜನೆ 2023 ಆನ್‌ಲೈನ್ ಅರ್ಜಿ ಆಹ್ವಾನ, Ganga Kalyan Yojane 2023 Online Application

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆ (Ganga Kalyan Yojane 2023) ಅಡಿಯಲ್ಲಿ ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಈ ಯೋಜನೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಯನ್ನು ಈ ಕೇಳಗಿನಂತೆ ನೀಡಲಾಗಿದೆ. ಸಂಪೂರ್ಣವಾಗಿ ಓದಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿರಿ.

ಗಂಗಾ ಕಲ್ಯಾಣ ನೀರಾವರಿ ಯೋಜನೆ (Ganga Kalyan Yojane 2023):

ಉಪ್ಪಾರ ಮತ್ತು ಇದರ ಉಪಜಾತಿಯವರು ಸಮಾಜದ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ
ಒದಗಿಸಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಘಟಕವೆಚ್ಚ: 2.50 ಲಕ್ಷರೂ.ಗಳಾಗಿದ್ದು, ಇದರಲ್ಲಿ ರೂ.2.00 ಲಕ್ಷಗಳ ಸಹಾಯಧನವನ್ನು ಸರ್ಕಾರ ನೀಡುತ್ತದೆ ಮತ್ತು ಹೆಚ್ಚುವರಿಯಾಗಿ ಅಗತ್ಯವಿದ್ದಲ್ಲಿ ರೂ.50,000/- ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ ನೀಡಲಾಗುತ್ತದೆ.

ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ
ಬಾವಿ ಘಟಕದ ವೆಚ್ಚ ರೂ.4. ಲಕ್ಷಗಳಾಗಿರುತ್ತದೆ. ಇದರಲ್ಲಿ ರೂ.3.50 ಲಕ್ಷಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ
ಅಗತ್ಯವಿದ್ದಲ್ಲಿ ರೂ.50,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ
ನೀಡಲಾಗುತ್ತದೆ.

ಭಾರತೀಯ ಸೇನೆ ಸೇರಲು ಉಚಿತ ತರಬೇತಿ

ಬೇಕಾಗುವ ದಾಖಲೆಗಳು:

  • ಆಧಾರ್ ಕಾರ್ಡ್ ಕಡ್ಡಾಯ
  • ಜಾತಿ/ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ಪಾಸ್‌ಬುಕ್‌
  • ಮತ್ತು ಇತರೆ ದಾಖಲೆಗಳು

Ganga Kalyan Yojane ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು :

• ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮತ್ತು ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು.
• ಕೇಂದ್ರ ಆಧಾ‌ರ್ ಅಧಿನಿಯಮ, 2016 ಸೆಕ್ಷನ್ (7)ರಡಿ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು.
• ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
• ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

• ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
• ಸರ್ಕಾರ/ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ವಿಶೇಷ ಸೂಚನೆ :
• ಅನುದಾನದ ಲಭ್ಯತೆಗೆ ಅನುಗುಣವಾಗಿ ಯೋಜನೆಯನ್ನು ಸೌಲಭ್ಯವನ್ನು ಸರ್ಕಾರದ ಆದೇಶ ಸಂಖ್ಯೆ:ಹಿಂವಕ 373 ಬಿ.ಎಂ.ಎಸ್ 2022 ಬೆಂಗಳೂರು ದಿ:05-07-2022ರ ನಿಯಮಗಳ ಪ್ರಕಾರ ಜಾರಿಗೊಳಿಸುವುದು.
• ಯೋಜನೆಗಳ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ, ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಗಂಗಾ ಕಲ್ಯಾಣ ನೀರಾವರಿ ಯೋಜನೆ (Ganga Kalyan Yojane) ಆನ್‌ಲೈನ್ ಅರ್ಜಿ ಸಲ್ಲಿಕೆ ವಿಧಾನ ಮತ್ತು ಅವಧಿ:

ಸೇವಾ ಸಿಂಧು ತಂತ್ರಾಂಶದ ಮುಖಾಂತರ ಫಲಾಪೇಕ್ಷಿಗಳು ದಿನಾಂಕ:17-01-2023 ರಿಂದ 02-03-2023 ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ .

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ನಿಗಮದ ವೆಬ್‌ಸೈಟ್ http://upparadevelopment.karnataka.gov.in ರಲ್ಲಿ ಪಡೆಯಬಹುದಾಗಿದೆ.
• ನಿಗಮದ ಸಹಾಯವಾಣಿ (Helpline) ಸಂಖ್ಯೆ: 7026288888ಗೆ ಬೆಳಿಗ್ಗೆ 10:00 ರಿಂದ ಸಂಜೆ 5:30ರವರೆಗೆ ಸಂಪರ್ಕಿಸಬಹುದಾಗಿದೆ.

ವಿಶೇಷ ಸೂಚನೆ: ಸೇವಾ ಸಿಂಧು ತಂತ್ರಾಂಶದ ಮೂಲಕ ಮಾತ್ರವೇ ಅರ್ಜಿಗಳನ್ನು ಸಲ್ಲಿಸಬೇಕು.

ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಬಿಸಿಡಬ್ಲ್ಯೂ 861 ಬಿಎಂಎಸ್ 2022 ಬೆಂಗಳೂರು ದಿನಾಂಕ:13-01-2023ರ ಪ್ರಕಾರ ಅನುಷ್ಠಾನಗೊಳಿಸುತ್ತಿದ್ದು ಪ್ರವರ್ಗ-1ರಡಿಯಲ್ಲಿ ಬರುವ ಕ್ರಮ ಸಂಖ್ಯೆ: 53(ಎ) ಯಿಂದ 53(ವಿ) ವರೆಗಿನ

Telegram Group Join Now
WhatsApp Group Join Now

Leave a Comment