ಗ್ಯಾಸ್ ಸಿಲಿಂಡರ್ ಬೆಲೆ 200ರೂ. ಇಳಿಕೆ: ಸರ್ಕಾರ ಘೋಷಣೆ | LPG Gas Prices Slashed 200 Rupees: Union Government

LPG Gas Prices Slashed 200 Rupees: ನಮಸ್ಕಾರ ಸ್ನೇಹಿತರೇ.. ಎಲ್‌ಪಿಜಿ ಸಿಲಿಂಡರ್‌ ಬಳಕೆದಾರರಿಗೆ ಗುಡ್‌ ನ್ಯೂಸ್.‌ ರಕ್ಷಾಬಂಧ ಮತ್ತು ಓನಮ್‌ ಹಬ್ಬಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ನೀಡಿದೆ.

ಎಲ್ಲಾ ಗೃಹ ಬಳಕೆಯ ಗ್ರಾಹಕರಿಗೆ ಪ್ರತಿ ಸಿಲಿಂಡರ್‌ಗೆ ₹ 200 ಅಡುಗೆ ಅನಿಲದ ಬೆಲೆಯನ್ನು ಕಡಿಮೆ (LPG Gas Price Reduced Today) ಮಾಡಲಾಗಿದೆ. ಉಜ್ವಲ ಯೋಜನೆಯಡಿ ಹೆಚ್ಚುವರಿ ಸಬ್ಸಿಡಿ ನೀಡಲು ಸಂಪುಟ ಅನುಮೋದನೆ ನೀಡಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ ₹ 400 ಸಬ್ಸಿಡಿ ಸಿಗಲಿದೆ. ಈ ಬಗ್ಗೆ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

LPG Gas Prices Slashed 200 Rupees

ಪ್ರಸ್ತುತ, ನವದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ₹ 1,103 ಇದ್ದು,. ಬುಧವಾರದಿಂದ ₹ 903 ರೂಪಾಯಿಗೆ ಸಿಗಲಿದೆ. ಅದೇ ರೀತಿಯಾಗಿ ಉಜ್ವಲಾ ಯೋಜನೆ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ ಸಬ್ಸಿಡಿಗೆ ₹ 200 ಪರಿಗಣಿಸಿ ₹ 703 ಬೆಲೆಗೆ ಸಿಗಲಿದೆ.

ಎಲ್ಲಾ ಬಳಕೆದಾರರಿಗೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹ 200 ಕಡಿತ ಮಾಡಲು ನಿರ್ಧರಿಸಿಲಾಗಿದ್ದು. ಇದು ರಕ್ಷಾ ಬಂಧನ ಮತ್ತು ಓಣಂ ಸಂದರ್ಭದಲ್ಲಿ ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉಡುಗೊರೆಯಾಗಿದೆ” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

75 ಲಕ್ಷ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ

ಕೇಂದ್ರ ಸಚಿವ ಸಂಪುಟ ಸಭೆಯ ಉದ್ದೇಶಿಸಿ ಮಾತನಾಡಿದ ಠಾಕೂರ್, ರಕ್ಷಾ ಬಂಧನ ಮತ್ತು ಓಣಂ ಸಂದರ್ಭದಲ್ಲಿ ಉಜ್ವಲ ಯೋಜನೆಯಡಿ 75 ಲಕ್ಷ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಉಜ್ವಲ ಯೋಜನೆಯ ಅಡಿಯಲ್ಲಿ, ಮಹಿಳೆಯರು ಗ್ಯಾಸ್ ಬರ್ನರ್, ಮೊದಲ ಅಡುಗೆ ಅನಿಲ ಸಿಲಿಂಡರ್ ಮತ್ತು ಪೈಪ್ ಅನ್ನು ಉಚಿತವಾಗಿ ಪಡೆಯುತ್ತಾರೆ ಎಂದು ಠಾಕೂರ್ ಹೇಳಿದರು. 75 ಲಕ್ಷ ಮಹಿಳೆಯರು ಗ್ಯಾಸ್ ಸಂಪರ್ಕ ಪಡೆದ ನಂತರ ಉಜ್ವಲ ಯೋಜನೆಯ ಒಟ್ಟು ಫಲಾನುಭವಿಗಳು 10. 35 ಕೋಟಿ ರೂ. ಆಗಲಿದ್ದಾರೆ.

ಕೊನೆಯ ಮಾತು: ಗ್ಯಾಸ್ ಸಿಲಿಂಡರ್ ಬೆಲೆ 200ರೂ. ಇಳಿಕೆ (LPG Gas Prices Slashed 200 Rupees) ಮಾಡಿರುವ ಮಾಹಿತಿ ಸಹಾಯವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸ್‌ಆಪ್‌ ಗ್ರೂಪ್‌ಗೆ ಅಥವಾ ಟೆಲಿಗ್ರಾಮ್‌ ಗ್ರೂಪ್‌ಗೆ ಸೇರಬಹುದು. ಧನ್ಯವಾದಗಳು.

ಇತರೆ ಮಾಹಿತಿಗಳನ್ನು ಓದಿ

Education Loan: ವಿದ್ಯಾರ್ಥಿಗಳಿಗೆ 3 ಲಕ್ಷದವರೆಗೆ ಶೈಕ್ಷಣಿಕ ಸಾಲ ಯೋಜನೆ

ಸಣ್ಣ ವ್ಯಾಪಾರ ಆರಂಭಿಸಲು 50,000 ರೂ. ಸಾಲ ಮತ್ತು ಸಹಾಯಧನ

ವಾಹನ ಖರೀದಿಸಲು 3 ಲಕ್ಷ ಸಹಾಯಧನ, ಆನ್‌ಲೈನ್‌ ಅರ್ಜಿ ಸಲ್ಲಿಸಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

ಅನ್ನಭಾಗ್ಯ ಯೋಜನೆ: DBT Status ಚೆಕ್‌ ಮಾಡಿ

ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಮುಹೂರ್ತ ಫಿಕ್ಸ್, ಹೊಸ ದಿನಾಂಕ ನಿಗದಿ

ರೇಷನ್ ಕಾರ್ಡ್ Status ಅನ್ನು ಮೊಬೈಲ್‌ನಲ್ಲೇ ಚೆಕ್‌ ಮಾಡಿ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment