ಎಲ್ಲರಿಗೂ ನಮಸ್ಕಾರ. ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ (Ration Card Correction) ಮಾಡಿಸಲು ಕಾಯುತ್ತಿದ್ದೀರಾ..? ಹಾಗಿದ್ದರೇ ಇಲ್ಲಿದೆ ನಿಮಗೆ ಸಿಹಿ ಸುದ್ದಿ. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಹೆಸರು ಸೇರ್ಪಡೆ ಅಥವಾ Remove ಮಾಡಿಸಬೇಕಾ? ಹಾಗಿದ್ದೆರೆ ಈ ಲೇಖನವನ್ನು ಓದಿರಿ.
ರಾಜ್ಯ ಸರ್ಕಾರವು ಜಾಗಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಸೇರಿದಂತೆ ಮುಂತಾದ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಬೇಕಾಗುತ್ತದೆ. ಅನೇಕ ಜನರು ಪಡಿತರ ಚೀಟಿ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ. ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು ಮತ್ತು ಇತರೆ ಪ್ರಕ್ರಿಯೆ ಆರಂಭವಾಗಿದೆ.
Ration Card Correction Online Karnataka
ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಇಂದು (21-06-2024) ಕಾಲಾವಕಾಶ ನೀಡಲಾಗಿದೆ. ತಿದ್ದುಪಡಿ ಮಾಡಬಯಸುವವರರು ಈ ಸದುಪಯೋಗವನ್ನು ಪಡೆದುಕೊಳ್ಳಬಹುದು.
Karnataka Ration Card Correction Date:
ಈ ಕೆಳಗಿನ ಜಿಲ್ಲೆಯವರಿಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ. ಯಾರು ತಿದ್ದುಪಡಿ ಮಾಡಿಸಬೇಕು ಎಂದು ಕಾಯುತ್ತಿರುವವರು ತಿದ್ದುಪಡಿ ಮಾಡಿಸಿಕೊಳ್ಳಿ.
Server-3: ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಯ ರೇಷನ್ ಕಾರ್ಡ್ನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶ ಇದೆ.
Server-2: ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯವರಿಗೆ ತಿದ್ದುಪಡಿಗಾಗಿ ಕಾಲಾವಕಾಶ ನೀಡಲಾಗಿದೆ.
ತಿದ್ದುಪಡಿ ಮಾಡುವುದು ಹೇಗೆ?
ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ ಅಥವಾ ಸರ್ಕಾರ ಅನುಮೊದಿಸಿರುವ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಬಹುದು.
ರೇಷನ್ ಕಾರ್ಡ್ ತಿದ್ದುಪಡಿ:
- ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ
- ರೇಷನ್ ಕಾರ್ಡ್’ನಲ್ಲಿನ ಹೆಸರು ತಿದ್ದುಪಡಿ
- ರೇಷನ್ ಕಾರ್ಡ್’ನಲ್ಲಿನ ಕುಟುಂಬ ಯಜಮಾನಿ ಬದಲಾವಣೆ
- ರೇಷನ್ ಕಾರ್ಡ್ದಿಂದ ಹೆಸರನ್ನು ತೆಗೆಯಲು
- ರೇಷನ್ ಕಾರ್ಡ್ ಇ-ಕೆವೈಸಿ ಮತ್ತು ಇತರೆ ಸೇವೆಗಳು
Ration Card Amendment Date In Karnataka
ದಿನಾಂಕ: 21/06/2024
ಇತರೆ ಮಾಹಿತಿಗಳನ್ನು ಓದಿ:

