ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಗುಡ್ ನ್ಯೂಸ್, ಪಡಿತರ ಚೀಟಿಹೊಂದಿರುವ ಫಲಾನುಭವಿಗಳಿಗೆ ಪೌಷ್ಟಿಕ ವಸ್ತುಗಳನ್ನು ಒಳಗೊಂಡ ‘ಇಂದಿರಾ ಆಹಾರ ಕಿಟ್’ಗಳನ್ನು (Ration Card Food Kit) ಪ್ರತಿ ತಿಂಗಳು ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ ನೀಡುತ್ತಿದ್ದ 5Kg ಅಕ್ಕಿಯ ಬದಲಿಗೆ ಪರ್ಯಾಯವಾಗಿ ಇಂದಿರಾ ಆಹಾರ ಕಿಟ್ ಅನ್ನು ನೀಡುವ ಕುರಿತು ಪ್ರಸ್ತಾವವನ್ನು ಆಹಾರ ಇಲಾಖೆ ಸಿದ್ಧಪಡಿಸಿದೆ. ನಂದಿಬೆಟ್ಟದಲ್ಲಿ ಜುಲೈ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಪಡಿತರ ಚೀಟಿ ಹೊಂದಿರುವ ಕೆಲವು ಕುಟುಂಬಗಳು ಪಡೆಯುತ್ತಿರುವ ಅಕ್ಕಿಯ ಪ್ರಮಾಣವು ಅವರ ತಿಂಗಳ ಬಳಕೆಯ ಅಗತ್ಯಕ್ಕಿಂತ ಹೆಚ್ಚಾಗಿದ್ದು, ಅಕ್ಕಿಯ ದುರುಪಯೋಗ ಆಗದಂತೆ ತಪ್ಪಿಸಲು ಹೆಚ್ಚವರಿ ಅಕ್ಕಿಯ ಬದಲು ಪೌಷ್ಟಿಕಾಂಶ ಒಳಗೊಂಡ ಕಿಟ್ (Ration Card Food Kit) ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೆಚ್ಚುವರಿಯಾಗಿ ನೀಡುತ್ತಿರುವ 5kg ಅಕ್ಕಿಯ ಬದಲಾಗಿ ಸಕ್ಕರೆ, ಉಪ್ಪು, ತೊಗರಿಬೇಳೆ, ಚಹಾ ಪುಡಿ, ಕಾಫಿ ಪೌಡರ್, ಅಡುಗೆ ಎಣ್ಣೆ, ಗೋಧಿ ಹಿಟ್ಟು ಒಳಗೊಂಡ ಆಹಾರ ಕಿಟ್ ವಿತರಣೆಗೆ ಆಹಾರ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕರೆ ಮಾತ್ರ ವಿತರಣೆ ಮಾಡುವ ಸಾಧ್ಯತೆ ಇದೆ.
ಇತರೆ ಮಾಹಿತಿಗಳು:

